How to save someone in the water? : ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ ಹಾಗೂ ವಿಪತ್ತು ಸಂದರ್ಭವನ್ನ ನಿಭಾಯಿಸುವುದು ಹೇಗೆ ಎಂಬುದರ ಬಗ್ಗೆ ಮೈಸೂರಿನ ನಂಜನಗೂಡಿನ ಕಪಿಲಾ ನದಿ ತೀರದಲ್ಲಿ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯ್ತು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ನಂಜನಗೂಡು ತಾಲೂಕು ಆಡಳಿತದ ವತಿಯಿಂದ ಎನ್ಡಿಆರ್ಎಫ್ ತಂಡ, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ವಿಪತ್ತು ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಡಲಾಯ್ತು. ಆಕಸ್ಮಿಕವಾಗಿ ವ್ಯಕ್ತಿಗಳು ನೀರಿನಲ್ಲಿ ಮುಳುಗಿದ ಅಥವಾ ಪ್ರವಾಹ ಎದುರಾದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದ ವ್ಯಕ್ತಿಯನ್ನು ಹೇಗೆ ರಕ್ಷಣೆ ಮಾಡಬೇಕು, ಅದಕ್ಕೆ ಅನುಸರಿಸಬೇಕಾದ ಕ್ರಮ ಮತ್ತು ನೀರಿನಲ್ಲಿ ಮುಳುಗಿದ ವ್ಯಕ್ತಿಯನ್ನು ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡುವುದು ಹೇಗೆ ಎಂಬುದನ್ನ ತೋರಿಸಲಾಯ್ತು.