ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳಿಂದಾಗಿ ಜನಸಾಮಾನ್ಯರ ಬದುಕೇ ಅಳಿಸಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದೆ. ಸರ್ಕಾರ ಗ್ಯಾರಂಟಿಗಳನ್ನು ಹಿಂಪಡೆಯದಿದ್ದರೆ ಬದುಕು ಇನ್ನಷ್ಟು ಕಠಿಣವಾಗಲಿದೆ ಎಂದು ಹೇಳಿದ್ದಾರೆ.