ಮೈಸೂರು: ಊರಿಗೆ ಬಂದಿದ್ದ ಹುಲಿಯನ್ನು ಕಾಡಿಗೆ ಓಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ
8 months ago
56
ARTICLE AD
ಕಾಡಿನಿಂದ ನಾಡಿಗೆ ಬಂದು ಭೀತಿ ಮೂಡಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ತ್ವರಿತ ಕಾರ್ಯಾಚರಣೆಯಿಂದ ಕಾಡಿಗೆ ವಾಪಸಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೈರಿಗೆ ಗ್ರಾಮದ ತಮ್ಮೇಗೌಡ ಎಂಬುವರ ತೆಂಗಿನ ತೋಟದಲ್ಲಿ ಹುಲಿ ಕಾಣಿಸಿಕೊಂಡಿತ್ತು. ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಮೂಲಕ ಹುಲಿಯನ್ನ ಮತ್ತೆ ಕಾಡಿಗಟ್ಟುವಲ್ಲಿ ಯಶಸ್ವಿಯಾದರು.